ಮಂಗಳೂರು: ಭ್ರಷ್ಟ ಅಧಿಕಾರಿಗಳು ಎಸಿಬಿ ಬಲೆಗೆ

Update: 2019-05-21 15:07 GMT

ಮಂಗಳೂರು, ಮೇ 21: ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತ ನಿಗಮದ ಮ್ಯಾನೇಜರ್ ಮತ್ತು ಕ್ಲರ್ಕ್ ಎಸಿಬಿ ಬಲೆಗೆ ಮಂಗಳವಾರ ಬಿದ್ದಿದ್ದಾರೆ.

ಅಲ್ಪಸಂಖ್ಯಾತ ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀಧರ್ ಭಂಡಾರಿ ಮತ್ತು ಕ್ಲರ್ಕ್ ರಹಿಲ್ ಎಸಿಬಿ ಬಲೆಗೆ ಬಿದ್ದವರು ಎಂದು ಗುರುತಿಸಲಾಗಿದೆ.

ಇವರು ವ್ಯಕ್ತಿಯೊಬ್ಬರಿಂದ ಉದ್ಯಮ ಸ್ಥಾಪನೆಗಾಗಿ 1 ಲಕ್ಷ ರೂ. ಸಬ್ಸಿಡಿ ಹಣ ಬಿಡುಗಡೆ ಮಾಡಲು 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ.

ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಅಲ್ಪಸಂಖ್ಯಾತ ನಿಗಮ ಕಚೇರಿಯಿಂದ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News