ಸಿಲಿಂಡರ್ ಸ್ಫೋಟಗೊಂಡು ಗೋದಾಮಿನಲ್ಲಿ ಬೆಂಕಿ ಅವಘಡ

Update: 2019-05-21 16:35 GMT

ಬೆಂಗಲೂರು, ಮೇ 21: ಸಿಲಿಂಡರ್ ಸ್ಫೋಟಗೊಂಡು ಶಾಮಿಯಾನ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿರುವ ದುರ್ಘಟನೆ ಇಲ್ಲಿನ ಬನಶಂಕರಿ 3 ನೇ ಹಂತ ಹೊಸ ಕೆರೆಹಳ್ಳಿಯಲ್ಲಿ ನಡೆದಿದೆ.

ಸೋಮವಾರ ತಡರಾತ್ರಿ ಕಾಣಿಸಿಕೊಂಡಿರುವ ಬೆಂಕಿ ನೋಡನೋಡುತ್ತಿದ್ದಂತೆ ಎಲ್ಲವೂ ಸುಟ್ಟುಹೋಗಿದೆ. ಕೂಡಲೇ ಬೆಂಕಿ ನಂದಿಸಲು 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬಂದು ಬೆಂಕಿ ನಂದಿಸಲಾಯಿತು.

ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಶಾಮಿಯಾನ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದ್ದು, ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News