ಹನೂರು: ಕಾಡಾನೆ ದಾಳಿಗೆ ಅರಣ್ಯ ವೀಕ್ಷಕ ಬಲಿ

Update: 2019-05-21 17:33 GMT

ಹನೂರು, ಮೇ 21: ಕಾಡಾನೆ ದಾಳಿ ನಡೆಸಿದ ಪರಿಣಾಮ ಅರಣ್ಯ ವೀಕ್ಷಕ ಸಾವನ್ನಪ್ಪಿರುವ ಘಟನೆ ಹನೂರು ತಾಲೂಕಿನ ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಲಯದ ಇಂಡಿಗನತ್ತ ಸಮೀಪ ಮಂಗಳವಾರ ನೆಡೆದಿದೆ.

ಮೃತ ವ್ಯಕ್ತಿಯನ್ನು ಹಳೆಯೂರು ಗ್ರಾಮದ ಹಲಗತಂಬಡಿ(50) ಎಂದು ಗುರುತಿಸಲಾಗಿದೆ. 

ಘಟನೆ ವಿವರ: ಹಲಗತಂಬಡಿ ಮಲೈಮಹದೇಶ್ವರ ಬೆಟ್ಟದ ಇಂಡಿಗನತ್ತ ಗಸ್ತಿನಲ್ಲಿದ್ದಾಗ ಮಂಗಳವಾರ ಮದ್ಯಾಹ್ನ ಏಕಾಏಕಿ ಆನೆಯೊಂದು ದಾಳಿ ನಡೆಸಿದ್ದು, ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಮೃತರ ಸಂಬಂಧಿಕರು ಮೃತದೇಹವನ್ನು ಅರಣ್ಯ ಇಲಾಖೆ ಕಚೇರಿ ಮುಂದೆ ಇಟ್ಟು ಪ್ರತಿಭಟನೆ ನಡೆಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News