ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ ಹೇಳಿದ್ದು ಹೀಗೆ…

Update: 2019-05-22 11:52 GMT

ಹೊಸದಿಲ್ಲಿ, ಮೇ 22: ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಒಂದು ದಿನ ಉಳಿದಿರುವಂತೆಯೇ ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಕಾರ್ಯಕರ್ತರು ಮುಂದಿನ 24 ಗಂಟೆ ಎಚ್ಚರದಿಂದಿರಬೇಕು ಎಂದಿದ್ದಾರೆ.

“ಮುಂದಿನ 24 ಗಂಟೆಗಳು ಪ್ರಮುಖವಾಗಿದೆ. ಎಚ್ಚರ ಮತ್ತು ಎಚ್ಚರಿಕೆಯಿಂದಿರಿ. ಹೆದರಬೇಡಿ. ನೀವು ಸತ್ಯಕ್ಕಾಗಿ ಹೋರಾಡುತ್ತಿದ್ದೀರಿ. ನಕಲಿ ಚುನವಣೋತ್ತರ ಸಮೀಕ್ಷೆಗಳಿಂದ ನಿರಾಶರಾಗಬೇಡಿ. ನಿಮ್ಮ ಬಗ್ಗೆ ನಂಬಿಕೆಯಿಟ್ಟುಕೊಳ್ಳಿ. ನಿಮ್ಮ ಕಠಿಣ ಶ್ರಮ ವ್ಯರ್ಥವಾಗುವುದಿಲ್ಲ. ಜೈ ಹಿಂದ್” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News