ಚಂದ್ರಬಾಬು ನಾಯ್ಡುರಿಂದ ಗೊಂದಲ ಸೃಷ್ಟಿ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

Update: 2019-05-22 16:14 GMT

ಬೆಂಗಳೂರು, ಮೇ 22: ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಸ್ತುವಾರಿ ವೇಣುಗೋಪಾಲ್ ಅವರ ಬಗ್ಗೆ ಮಾಜಿ ಸಚಿವ ಆರ್ ರೋಷನ್ ಬೇಗ್ ನೀಡಿರುವ ಹೇಳಿಕೆ ಅವರ ವೈಯಕ್ತಿಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತನ್ನ ರಾಜ್ಯದಲ್ಲಿ ಸೋಲಲಿದ್ದಾರೆ. ಆದರೆ, ಕರ್ನಾಟಕಕ್ಕೆ ಬಂದು ದೇವೇಗೌಡರನ್ನು ಭೇಟಿ ಮಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆಂದು ಟೀಕಿಸಿದರು.

ಯಾವುದೇ ಕಾರಣಕ್ಕೂ ರಾಜ್ಯದ ಜನತೆ ವಿಚಲಿತರಾಗುವ ಅಗತ್ಯವಿಲ್ಲ. ಎನ್‌ಡಿಎ 300ಕ್ಕೂ ಹೆಚ್ಚು ಸ್ಥಾನ ಗಳಿಸಲಿದ್ದು, ರಾಜ್ಯದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಸ್ಥಾನಗಳನ್ನು ನಿಶ್ಚಿತವಾಗಿಯೂ ಗೆಲ್ಲಲಿದೆ. ಉಪ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ. ಈ ಬಗ್ಗೆ ಯಾರೊಬ್ಬರಿಗೂ ಸಂಶಯಬೇಡ ಎಂದು ಯಡಿಯೂರಪ್ಪ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News