ಪಿ.ಜಿ.ಆರ್.ಸಿಂಧ್ಯಾಗೆ ಕಸಾಪ ದತ್ತಿ ಪ್ರಶಸ್ತಿ

Update: 2019-05-22 17:43 GMT

ಬೆಂಗಳೂರು, ಮೇ 22: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಈ ಸಾಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ 25 ಸಾವಿರ ನಗದು, ಫಲಕ ಒಳಗೊಂಡಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಈ ಆಯ್ಕೆ ಮಾಡಿದೆ. ಅದೇ ರೀತಿ, ಜಾನಪದ ಕಲಾವಿದರಾದ ಮಹಾದೇವಸ್ವಾಮಿ, ಕಾಮನಹಳ್ಳಿ ಮಲ್ಲಮ್ಮ ಮ್ಯಾಗೇರಿ ಮತ್ತು ಜೋಗಿಲ ಸಿದ್ದರಾಜು ಕಸಾಪ ನೀಡುವ ಈ ಸಾಲಿನ ತಾಯಮ್ಮ ಎಸ್.ಸಿ.ಮಲ್ಲಯ್ಯ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News