ಅಂಚೆ ಮತಗಳ ಎಣಿಕೆ ಆರಂಭ: 9ರಲ್ಲಿ ಬಿಜೆಪಿ ಮುನ್ನಡೆ
Update: 2019-05-23 02:49 GMT
ಬೆಂಗಳೂರು, ಮೇ 23: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಅಂಚೆ ಮತಗಳ ಮತಎಣಿಕೆ ಆರಂಭಗೊಂಡಿದ್ದು 9ರಲ್ಲಿ ಬಿಜೆಪಿ, 2ರಲ್ಲಿ ಕಾಂಗ್ರೆಸ್ , 1ರಲ್ಲಿ ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ 1ರಲ್ಲಿ ಮುನ್ನಡೆ ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ , ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅಂಚೆ ಮತಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ,ಎಂ ಸಿದ್ದೇಶ್ವರ್, ಚಿಕ್ಕೋಡಿಯಲ್ಲಿ ಅಣ್ಣಾ ಸಾಹೇಬ್ ಜೊಲ್ಲೆಗೆ ,ಬಳ್ಳಾರಿಯಲ್ಲಿ ವೇ ದೇವೇಂದ್ರಪ್ಪ ಅಂಚೆ ಮತಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಉಡುಪಿ ಚಿಕ್ಕಮಗಳೂರಿನಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ, ಸುರೇಶ್ ಮುನ್ನಡೆಯಲ್ಲಿದ್ದಾರೆ.