ರಾಜ್ಯ ಸರಕಾರದ ಪತನಕ್ಕೆ ಕ್ಷಣಗಣನೆ : ಶೋಭಾ ಕರಂದ್ಲಾಜೆ

Update: 2019-05-23 07:29 GMT

ಉಡುಪಿ: ಮಂಡ್ಯ ದಲ್ಲಿ ಹಾವು ಏಣಿ ಆಟ ಮುಂದುವರೆದಿದೆ. ದೇವೇಗೌಡ, ಖರ್ಗೆ, ಮುನಿಯಪ್ಪ, ಮೊಯ್ಲಿ ಅವರಿಗೆ ಸೋಲಾಗಿದೆ. ಕಾಂಗ್ರೆಸ್ ನ ನಾಲ್ಕು ಘಟಾನುಘಟಿಗಳಿಗೆ ಸೋಲಾಗಿದ್ದು, ರಾಜ್ಯ ಸರಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಉಡುಪಿ - ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಉಡುಪಿಯ ಮತ ಎಣಿಕಾ ಕೇಂದ್ರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಆಗಮಿಸಿ, ನಂತರ ಮಾತನಾಡಿದರು. 

ಬಿಜೆಪಿ ದೇಶದಲ್ಲಿ ಜಯಗಳಿಸಲಿದೆ. ಮೆಜಾರಿಟಿ ನಮಗೆ ಸಿಗಲಿದೆ ಎಂಬ ವಿಶ್ವಾಸವಿದೆ. ಎಕ್ಸಿಟ್ ಪೋಲ್ ಬಗ್ಗೆ ಸಿದ್ದರಾಮಯ್ಯ, ಕುಮಾರಸ್ವಾಮಿ ಗೇಲಿ ಮಾಡಿದ್ದರು. ಮೋದಿ ಸುನಾಮಿ‌ ಕರ್ನಾಟಕದ ವಿಪಕ್ಷವನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಿದೆ. ಜನ ಸಮ್ಮಿಶ್ರ ಸರಕಾರದ ಜೊತ ಇಲ್ಲ. ಕುಮಾರಸ್ವಾಮಿ ಸರಕಾರಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

ರಾಜ್ಯ ಸರಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಮಹಾ ಘಟಬಂಧನ್ ಛಿದ್ರವಾಗಿದೆ. ರಾಜ್ಯ ಅಪವಿತ್ರ ಮೈತ್ರಿಗೆ ಎರಡು ಪಕ್ಷ ನಾಶವಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News