ಮಂಗಳೂರು: ಬಿಜೆಪಿ ಕಾರ್ಯಕರ್ತರು- ಪೊಲೀಸರ ನಡುವೆ ವಾಗ್ವಾದ

Update: 2019-05-23 13:11 GMT

ಮಂಗಳೂರು : ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ವಿಜಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಚುನಾವಣಾ ಕಚೇರಿ ಮುಂಭಾಗ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು‌.

ವಾಹನವೊಂದರಲ್ಲಿ ಕಚೇರಿಯ ಹೊರಭಾಗ ಬಾವುಟ ಪ್ರದರ್ಶಿಸಿ ಬಿಜೆಪಿ ಕಾರ್ಯಕರ್ತರು ಉದ್ಘೋಷ ಕೂಗಲೆತ್ನಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ವಾತಾವರಣ ತಿಳಿಗೊಳಿಸಿದರು‌.

"ಹಿಂದೂಗಳಿಗೆ ಮಾತ್ರ ರಸ್ತೆಯಲ್ಲಿ ಉದ್ಘೋಷ ಕೂಗಲು ನೀವು ಬಿಡಲ್ಲ, ಪಂಪ್ ವೆಲ್ ಮುಂತಾದೆಡೆ ಮುಸ್ಲಿಮರು ಗಂಟೆಗಳ ಕಾಲ ಸಂಚಾರಕ್ಕೆ ಅಡಚಣೆ ಮಾಡಿದರೂ ಸುಮ್ಮನಿರುತ್ತೀರಿ' ಎಂದು ಬಿಜೆಪಿ ಕಾರ್ಯಕರ್ತರು ಪೊಲೀಸರತ್ತ ಮುಗಿಬಿದ್ದರು. ಬಳಿಕ ಪೊಲೀಸರು ಸ್ಥಳದಿಂದ ವಾಹನ ಹಾಗೂ ಕಾರ್ಯಕರ್ತರನ್ನು ತೆರವುಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News