ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ, ನಳಿನ್ ಗೆ ಅಭಿನಂದನೆ: ಯು.ಟಿ.ಖಾದರ್

Update: 2019-05-23 15:56 GMT

ಮಂಗಳೂರು: ರಾಜ್ಯ ಹಾಗೂ ದಕ್ಷಿಣ ಕನ್ನಡ ಲೋಕಸಭೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷಕ್ಕೆ ಅನಿರೀಕ್ಷಿತ ಸೋಲುಂಟಾಗಿದೆ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಹಗಲಿರುಳು ಕೆಲಸ ಮಾಡಿದರು ಕೂಡಾ ಗೆಲ್ಲಲಾಗಿಲ್ಲ. ಜಿಲ್ಲೆಯ ಜನತೆ ಕೊಟ್ಟ ತೀರ್ಪಿಗೆ ಕೃತಜ್ಞತಾ ಪೂರ್ವಕ ತಲೆಬಾಗುತ್ತೇವೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾಗಿ ಪುನರಾಯ್ಕೆಯಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆ ಸಲ್ಲಿಸಿದ ಯು.ಟಿ. ಖಾದರ್ ಅವರು ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರ ಸರಕಾರದೊಂದಿಗೆ ರಾಜ್ಯ ಸರಕಾರವೂ ಸಂಪೂರ್ಣ ಸಹಕಾರ ನೀಡಲಿದೆ ಎಂದರು. ಸೋಲು ಶಾಶ್ವತವಲ್ಲ. ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿ ಸಂಘಟನೆ ಮುಖಾಂತರ ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತ ತತ್ವವನ್ನು ರಕ್ಷಣೆ ಮಾಡಿ ಉಳಿಸಲಿಕ್ಕೆ ಪಣ ತೊಡಲಿದೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.

ರಾಜ್ಯದಲ್ಲಿ ದಕ್ಷಿಣ ಕನ್ನಡ ಗರಿಷ್ಟ ಮತದಾನವಾದಂತಹ ಜಿಲ್ಲೆ. ಇಲ್ಲಿ ಶಾಂತಿಯುತವಾಗಿ ಚುನಾವಣೆಯಾಗಿದೆ. ಇದಕ್ಕಾಗಿ ಎಲ್ಲಾ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು, ಜಿಲ್ಲಾಡಳಿತದ ಎಲ್ಲಾ ಅಧಿಕಾರಿ ವರ್ಗದವರನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಭಿನಂದಿಸಿ, ಕೃತಜ್ಞತೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News