ಮೊದಲು ವಿವಿಪ್ಯಾಟ್ ತಾಳೆಯಾಗಲಿ: ಮಮತಾ ಬ್ಯಾನರ್ಜಿ

Update: 2019-05-23 17:11 GMT

ಕೋಲ್ಕತಾ, ಮೇ 23: ತಮ್ಮ ಪಕ್ಷವು ಲೋಕಸಭಾ ಚುನಾವಣೆಯ ಫಲಿತಾಂಶದ ಸಂಪೂರ್ಣ ಪರಿಶೀಲನೆ ನಡೆಸಲಿದೆ ಎಂದು ಟಿಎಂಸಿ ಮುಖಂಡೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಗೆದ್ದವರಿಗೆ ಅಭಿನಂದನೆಗಳು. ಆದರೆ ಸೋತ ಎಲ್ಲರೂ ಸೋತವರಲ್ಲ. ಸಂಪೂರ್ಣ ಪರಿಶೀಲನೆ ನಡೆಸಿದ ಬಳಿಕ ನಮ್ಮ ಅಭಿಪ್ರಾಯವನ್ನು ತಿಳಿಸುತ್ತೇವೆ. ಮೊದಲು ಮತಎಣಿಕೆ ಪ್ರಕ್ರಿಯೆ ಪೂರ್ಣಗೊಂಡು ವಿವಿಪ್ಯಾಟ್ ರಶೀದಿಯೊಡನೆ ತಾಳೆಯಾಗಲಿ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ. ವಿಪಕ್ಷಗಳ ಪ್ರಮುಖ ನಾಯಕಿಯಾಗಿರುವ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಆಕ್ರಮಣಕಾರಿ ಪ್ರಚಾರ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News