ರಸ್ತೆ ಅಪಘಾತ: ಯುವಕ ಮೃತ್ಯು

Update: 2019-05-23 19:21 GMT

ಬೆಂಗಳೂರು, ಮೇ 23: ಶರವೇಗವಾಗಿ ಸಾಗಿ ಬಂದ ಕಾರೊಂದು, ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಂಪ್ಯೂಟರ್ ಆಪರೇಟರ್ ಒಬ್ಬರು ಮೃತಪಟ್ಟಿರುವ ಘಟನೆ ನಗರದ ಅವೇಡದೇನಹಳ್ಳಿ ಗೇಟ್ ಬಳಿ ನಡೆದಿದೆ.

ಅವೇಡದೇನಹಳ್ಳಿ ಮುನಿರಾಜು (20) ಮೃತ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ಯಾಗಡದೇನಹಳ್ಳಿ ಪಂಚಾಯತ್ ನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮುನಿರಾಜು ಅವರು ಬುಧವಾರ ಅವೇಡದೇನಹಳ್ಳಿ ಗೇಟ್ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಆನೇಕಲ್‌ನ ಅಲಯನ್ಸ್ ಕಾಲೇಜು ವಿದ್ಯಾರ್ಥಿಗಳು ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿ ಹೊಡೆದಿರುವ ಪರಿಣಾಮ, ಈ ಅವಘಡ ಸಂಬಂಧಿಸಿದೆ ಎನ್ನಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಕೊಂಡಿರುವ ಆನೇಕಲ್ ಸಂಚಾರ ಠಾಣಾ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News