ನಿಂತಿದ್ದ ಲಾರಿಗೆ ಕಾರು ಢಿಕ್ಕಿ: ಕೇರಳ ಮೂಲದ ನಾಲ್ವರು ಮೃತ್ಯು

Update: 2019-05-24 04:31 GMT

ಮಂಡ್ಯ, ಮೇ 24: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಲಾರಿಯೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಮೃತರನ್ನು ಜಯದೀಪ್(29), ಅವರ ಪತ್ನಿ ಜ್ಞಾನತೀರ್ಥ(26), ಕಿರಣ್(30) ಹಾಗೂ ಅವರ ಪತ್ನಿ ಜಾನ್ಸಿ(27) ಎಂದು ಗುರುತಿಸಲಾಗಿದೆ. ಇವರು ಕೇರಳದ ಕಣ್ಣೂರು ಜಿಲ್ಲೆಯವರೆಂದು ತಿಳಿದುಬಂದಿದೆ.

ಕೇರಳ ಮೂಲದವರಾದ ಇವರು ಬೆಂಗಳೂರಿನಿಂದ ಮೈಸೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಮದ್ದೂರು ಪಟ್ಟಣದ ಕೊಪ್ಪವೃತ್ತದ ಬಳಿ ಈ ಅಪಘಾತ ಸಂಭವಿಸಿದೆ. ಕೊಪ್ಪ ವೃತ್ತದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಲಾರಿಯೊಂದಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮದ್ದೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News