ನನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ: ಪ್ರಜ್ವಲ್

Update: 2019-05-24 05:21 GMT

ಹಾಸನ, ಮೇ 24: ನಾನು  ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಹಾಸನದ ನೂತನ ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಾಸನ ಲೋಕಸಭಾ ಕ್ಷೇತ್ರವನ್ನು  ದೇವೇಗೌಡರಿಗೆ ಬಿಟ್ಟುಕೊಡುವೆ. ನಾನು  ಪ್ರೀತಿಯಿಂದ ಹೇಳುತ್ತೀದ್ದೇನೆ. ಅವರು  ಸ್ವೀಕರಿಸಬೇಕು ಎಂದು ಹೇಳಿದರು.
ನಾವು ಹಾಸನದಲ್ಲಿ ದೇವೇಗೌಡರನ್ನು ಗೆಲ್ಲಿಸಿ ವಿಜಯೋತ್ಸವ ಮಾಡುತ್ತೇವೆ. ಇಂದು ಮಧ್ಯಾಹ್ನ ದೇವೇಗೌಡರನ್ನು ಭೇಟಿಯಾಗಿ ಮುಂದಿನ ನಡೆಯ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News