ಪ್ರಧಾನಿ ಮೋದಿಯ ರಾಜೀನಾಮೆ ಸ್ವೀಕರಿಸಿದ ರಾಷ್ಟ್ರಪತಿ ಕೋವಿಂದ್
Update: 2019-05-24 14:48 GMT
ಹೊಸದಿಲ್ಲಿ, ಮೇ 24: ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ವಿಶೇಷ ಕ್ಯಾಬಿನೆಟ್ ಸಭೆಯ ಬಳಿಕ 16ನೆ ಲೋಕಸಭೆ ವಿಸರ್ಜನೆಗೆ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಸಭೆ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. 16 ಲೋಕಸಭೆಯ ಅವಧಿ ಮುಗಿಯುವ ಜೂನ್ 3ರ ಮೊದಲು ಮುಂದಿನ ಲೋಕಸಭೆ ರಚನೆಯಾಗಬೇಕಿದೆ.