ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಡಾ.ಉಮೇಶ್ ಜಾಧವ್

Update: 2019-05-24 14:39 GMT

ಬೆಂಗಳೂರು, ಮೇ 24:ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡುವುದು ಸೂಕ್ತ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಡಾ.ಉಮೇಶ್ ಜಾಧವ್ ಇಂದಿಲ್ಲಿ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಿದರೆ ಒಳ್ಳೆಯ ಸಂದೇಶ ಜನರಿಗೆ ಹೋಗುತ್ತದೆ. ಅಲ್ಲದೆ, ಈ ಮೈತ್ರಿ ಸರಕಾರವನ್ನು ಯಾರೂ ಪತನ ಮಾಡುವುದಿಲ್ಲ. ಸಹಜವಾಗಿಯೇ ಈ ಸರಕಾರವೇ ಬೀಳುತ್ತದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್‌ನ ಅತೃಪ್ತ ಶಾಸಕರು ಬಿಜೆಪಿ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ನನ್ನ ಸ್ನೇಹಿತರೆ. ಅವರು ಬಿಜೆಪಿಗೆ ಬರಲು ಅವಕಾಶವಿದೆ. ಕೇಂದ್ರದಲ್ಲಿ ಸಚಿವನಾಗುವ ಅಪೇಕ್ಷೆ ನನಗಿಲ್ಲ. ಸ್ಥಾನಮಾನ ಕೊಟ್ಟರೆ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ನುಡಿದರು.

ಕಾಂಗ್ರೆಸ್ ಹಿರಿಯ ಮಲ್ಲಿಕಾರ್ಜುನ ಖರ್ಗೆಯವರದ್ದು ಮುಗಿದ ಅಧ್ಯಾಯ. ಆ ಬಗ್ಗೆ ಮಾತನಾಡುವುದಿಲ್ಲ. ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪನವರು ನನ್ನ ಮೇಲೆ ಭರವಸೆ ಇಟ್ಟು ಚುನಾವಣಾ ಟಿಕೆಟ್ ಕೊಟ್ಟಿದ್ದರು. ಅವರ ನಂಬಿಕೆಯನ್ನು ಉಳಿಸಿಕೊಂಡಿದ್ದೇನೆ ಎಂದು ಜಾಧವ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News