ಉಡುಪಿ: ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ

Update: 2019-05-24 15:13 GMT

ಉಡುಪಿ, ಮೇ 24: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಮೇ 27ರಂದು ಬೆಳಿಗ್ಗೆ 11 ಗಂಟೆಯಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರ, ಮೇ 28ರಂದು ಬೆಳಿಗ್ಗೆ 11ರಿಂದ 12:30ರವರೆಗೆ ಕಾಪು ತಾಲೂಕು ಕಚೇರಿ, ಮೇ 29ರಂದು ಬೆಳಿಗ್ಗೆ 11ರಿಂದ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಮೇ 30ರಂದು ಬೆಳಗ್ಗೆ 11ರಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರಲ್ಲಿ ದೂರು ಸ್ವೀಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ (ದೂರವಾಣಿ:0820-2527770), ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ (ದೂರವಾಣಿ: 0820- 2536661) ಸಂಪರ್ಕಿಸಬಹುದು ಎಂದು ಉಡುಪಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News