ಮೇ 26-27: ರಾಜ್ಯ ಮಟ್ಟದ ಅಧ್ಯಯನ ಶಿಬಿರ
Update: 2019-05-24 16:04 GMT
ಮಂಗಳೂರು, ಮೇ 24 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನಾವಾದ ರಾಜ್ಯ ಸಮಿತಿಯ ವತಿಯಿಂದ ಭಗವಾನ್ ಬುದ್ಧ ಜಯಂತಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರರ 128ನೆ ಜನ್ಮ ದಿನಾಚರಣೆಯ ಅಂಗವಾಗಿ ರಾಜ್ಯ ಮಟ್ಟದ ಅಧ್ಯಯನ ಶಿಬಿರ ಮೇ 26 ಮತ್ತು 27ರಂದು ನಗರದ ನಂತೂರಿನಲ್ಲಿರುವ ಶಾಂತಿಕಿರಣ ಸಭಾಂಗಣದಲ್ಲಿ ನಡೆಯಲಿದೆ.
ಶಿಬಿರ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್ ನೆರವೇರಿಸಲಿದ್ದು ,ಕುದ್ಮುಲ್ ರಂಗರಾವ್ ಪ್ರತಿಷ್ಠಾನದ ಅಧ್ಯಕ್ಷ ಕೇಶವ ಧರಣಿ ಮುಖ್ಯ ಭಾಷಣ ಮಾಡಲಿದ್ದಾರೆ. ಶಿಬಿರದಲ್ಲಿ ವಿವಿಧ ಜಿಲ್ಲೆಗಳ 250 ಶಬಿರಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.