ಲಾರಿ ಢಿಕ್ಕಿ: ಕಾರು ಚಾಲಕಗೆ ಗಾಯ

Update: 2019-05-24 16:34 GMT

ಪುತ್ತೂರು: ಮಾಣಿ-ಮೈಸೂರು ರಾ.ಹೆದ್ದಾರಿಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಶೇಕಮಲೆ ಸೇತುವೆ ಸಮೀಪ ಲಾರಿ ಮತ್ತು ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ರೈತ ಬಂಧು ಅಕ್ಕಿ ಸಾಗಾಟದ ಟಾಟಾ ಅಲ್ಟ್ರಾ ಲಾರಿ ಹಾಗೂ ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಮಧ್ಯೆ ಡಿಕ್ಕಿ ಸಂಭವಿಸಿದೆ.

ಕಾರು ಚಾಲಕ ಇನ್ನೊಂದು ವಾಹನವನ್ನು ಓವರ್‍ಟೇಕ್ ಮಾಡುವ ವೇಳೆ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಅಪಘಾತದಿಂದ ಕಾರು ಚಾಲಕನ ಕೈಗೆ ಗಂಭೀರ ಗಾಯವಾಗಿದೆ. ಗಾಯಾಳು ಕಾರು ಚಾಲಕನನ್ನು ಲಾರಿ ಚಾಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಪ್ಯ ಪೊಲೀಸ್ ಠಾಣಾ ಎಎಸ್ಸೈಗಳಾದ ನಾರಾಯಣ ಗೌಡ ಹಾಗೂ ಶ್ರೀಧರ ರೈಯವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News