ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ

Update: 2019-05-24 16:36 GMT

ಬೆಂಗಳೂರು, ಮೇ 24: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಸಂಜೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಶುಕ್ರವಾರ ಸಂಜೆ ಇಲ್ಲಿನ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದ ಉಭಯ ನಾಯಕರು ಲೋಕಸಭಾ ಚುನಾವಣೆ ಫಲಿತಾಂಶ, ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಿದರು.

ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ತಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ಇನ್ನೂ ಉತ್ತಮ ಸಮನ್ವಯ ಸಾಧಿಸುವ ಮೂಲಕ ಸರ್ಕಾರ ಮುನ್ನಡೆಸುವ ಬಗ್ಗೆ ಉಭಯ ಮುಖಂಡರು ಸಮಾಲೋಚನೆ ನಡೆಸಿದರು ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News