‘ದೇವರ ಕುದುರೆ’ಗೆ ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ
Update: 2019-05-24 17:30 GMT
ಬೆಂಗಳೂರು, ಮೇ 24: ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನವು ನೀಡುವ ಅತ್ಯುತ್ತಮ ಕಥಾಸಂಕಲನ ಪ್ರಶಸ್ತಿಗೆ, 2018ನೆ ಸಾಲಿಗೆ ಕತೆಗಾರ ಎಸ್.ಗಂಗಾಧರಯ್ಯ ಅವರ ‘ದೇವರ ಕುದುರೆ’ ಕಥಾಸಂಕಲನ ಆಯ್ಕೆಯಾಗಿದೆ.
'ದೇವರ ಕುದುರೆ’ ಕೃತಿಯನ್ನು ತಿಪಟೂರಿನ ಬಿಸಿಲುಕೋಲು ಪ್ರಕಾಶನ ಸಂಸ್ಥೆಯು ಪ್ರಕಟಿಸಿದೆ. ಪ್ರಶಸ್ತಿಯು 25 ಸಾವಿರ ರೂ.ನಗದು ಬಹುಮಾನ, ಪ್ರಶಸ್ತಿ ಫಲಕ, ಪ್ರಶಸ್ತಿ ಪ್ರತ್ರವನ್ನು ಒಳಗೊಂಡಿರುತ್ತದೆ. ಪ್ರಶಸ್ತಿಯನ್ನು 2019ರ ಜೂ.16ರಂದು ಮಂಡ್ಯದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಸಾಹಿತಿ ಡಾ.ಬಿ.ಎ.ವಿವೇಕ ರೈ ಅವರು ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯ ಅತಿಥಿಯಾಗಿ ವಿಮರ್ಶಕ ಬಂಜಗೆರೆ ಜಯಪ್ರಕಾಶ್ ಭಾಗವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಡಾ.ಕೆ.ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.