ಜನರ ಭಾವನೆಗಳೊಂದಿಗೆ ಮಾಧ್ಯಮಗಳು ಚೆಲ್ಲಾಟ ಆಡುವುದು ಸಲ್ಲ: ಸಿಎಂ ಕುಮಾರಸ್ವಾಮಿ

Update: 2019-05-25 14:32 GMT

ಬೆಂಗಳೂರು, ಮೇ 25: ‘ಮಾಧ್ಯಮಗಳು ಸುಳ್ಳು ಸುದ್ದಿಗಳ ಮೂಲಕ ಜನರ ಭಾವನೆಗಳೊಂದಿಗೆ ಚಲ್ಲಾಟವಾಡುವುದು ಬೇಡ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದಿಲ್ಲಿ ಮನವಿ ಮಾಡಿದ್ದಾರೆ.

‘ಕನ್ನಡ ಪತ್ರಿಕೆಯೊಂದು ಮಂಡ್ಯ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ. ನಿಖಿಲ್ ಚಾರಿತ್ರ್ಯವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ’ ಎಂದು ಅವರು ಟ್ವಿಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News