ಅನ್ಸಾರುಲ್ ಮುಸ್ಲಿಮೀನ್ ಅಸೋಶಿಯೇಶನ್‌ನಿಂದ ಇಫ್ತಾರ್ ಕೂಟ

Update: 2019-05-25 15:00 GMT

ದೇರಳಕಟ್ಟೆ, ಮೇ 25: ಇಲ್ಲಿನ ಬದ್ರಿಯ ಜುಮಾ ಮಸೀದಿಯ ಅಧೀನದಲ್ಲಿರುವ ಅನ್ಸಾರುಲ್ ಮುಸ್ಲಿಮೀನ್ ಅಸೋಶಿಯೇಶನ್‌ನ 35ನೇ ವಾರ್ಷಿಕ ಪ್ರಯುಕ್ತ ರಮಝಾನ್ ಪ್ರಭಾಷಣ ಹಾಗೂ ಇಫ್ತಾರ್ ಕೂಟವು ಮಸೀದಿಯ ವಠಾರದಲ್ಲಿ ಜರುಗಿತು.

ಅಂತಾರಾಷ್ಟ್ರೀಯ ವಾಗ್ಮಿ ಸಿಂಸಾರುಲ್ ಹಕ್ ಹುದವಿ ಅಬುದಾಭಿ ರಮಝಾನ್‌ನ ಸಂದೇಶ ನೀಡಿದರು. ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್‌ನ ಅಧ್ಯಕ್ಷ ಇಲ್ಯಾಸ್ ಹಾಜಿ ಡಿ. ಅಧ್ಯಕ್ಷತೆ ವಹಿಸಿದ್ದರು. ಬದ್ರಿಯ ಜುಮಾ ಮಸೀದಿಯ ಖತೀಬ್ ಶರೀಫ್ ಅರ್ಶದಿ, ಅಧ್ಯಕ್ಷ ಅಬ್ಬಾಸ್ ಹಾಜಿ ಡಿ, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಎನ್, ಕಾರ್ಯದರ್ಶಿ ಅಬ್ದಲ್ ಆರ್.ಅಹ್ಮದ್ ಶೇಟ್, ಕಾರ್ಯದರ್ಶಿಗಳಾದ ಅಬ್ದುಲ್ ರಶೀದ್ ಡಿ.ಎಂ,ಮುತ್ತಲೀಬ್, ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ಟ್ರಸ್ಟ್ ಅಧ್ಯಕ್ಷ ಅಬೂಬಕ್ಕರ್ ಹಾಜಿ ನಾಟೆಕಲ್, ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯ ಡಿ.ಎಂ. ಮುಹಮ್ಮದ್, ಹಯಾತುಲ್ ಇಸ್ಲಾಂ ಮದ್ರಸದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯಾಸರ್, ಕಾರ್ಯದರ್ಶಿ ಶಿಹಾಬುದ್ದೀನ್, ಸದರ್ ಮುಅಲ್ಲಿಂ ಅಬ್ದುಲ್ಲಾ ಫೈಝಿ, ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿ ಸದಸ್ಯ ತಬೂಕ್ ದಾರಿಮಿ, ದೇರಳಕಟ್ಟೆ ಶಾಖೆ ಅಧ್ಯಕ್ಷ ಮುಹಮ್ಮದ್ ಇರ್ಫಾನ್, ಕಾರ್ಯದರ್ಶಿ ಮುಹಮ್ಮದ್ ಮುನ್ಸೀದ್, ಮದರಸ ಮ್ಯಾನೇಜ್ಮೆಂಟ್ ದೇರಳಕಟ್ಟೆ ರೇಂಜ್ ಅಧ್ಯಕ್ಷ ಇಸ್ಮಾಯಿಲ್ ಹಾಜಿ, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಉಪಾಧ್ಯಕ್ಷ ಸಿದ್ದೀಕ್ ಡಿ.ಎಂ, ಕೋಶಾಧಿಕಾರಿ ಮುಹಮ್ಮದ್ ಯಾಸೀನ್, ಪ್ರಧಾನ ಕಾರ್ಯದರ್ಶಿ ಅಮೀರ್ ಹುಸೈನ್, ಜೊತೆ ಕಾರ್ಯದರ್ಶಿ ಅಬ್ದುಲ್ ಖಾದರ್ ಐ, ಹನೀಫ್ ಜೆ., ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News