ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ತರಬೇತಿ
Update: 2019-05-25 15:58 GMT
ಉಡುಪಿ, ಮೇ 25:2019-20ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು.
ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಜೂನ್ 4ರೊಳಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಇಲಾಖೆ ವೆಬ್ಸೈಟ್ -www.backwardclasses.kar.nic.in -ಅನ್ನು ಸಂಪರ್ಕಿಸುವಂತೆ ಉಡುಪಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.