ಕಾರ್ಕಳ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

Update: 2019-05-25 15:58 GMT

ಉಡುಪಿ, ಮೇ 25: ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕಾರ್ಕಳ ಬಸ್ ನಿಲ್ದಾಣ ಮತ್ತು ಕೋರ್ಟ್ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ ಒಟ್ಟು 44 ಪ್ರಕರಣಗಳನ್ನು ದಾಖಲಿಸಿ, 5000 ರೂ. ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಕಾರ್ಕಳ ಹಿರಿಯ ಆರೋಗ್ಯ ಸಹಾಯಕ ಶಿವರಾಮ ಭಟ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿದ್ದಪ್ಪ, ರಾಷ್ಟ್ರೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ಎನ್‌ಟಿಸಿಪಿ ಸಮಾಜಕಾರ್ಯಕರ್ತೆ ಶೈಲಾ ಶಾಮನೂರು, ಶಿಜಿನಿ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News