ಪ್ರೀತಿ ವಿಚಾರ: ವ್ಯಕ್ತಿಗೆ ಗುಂಡು ಹಾರಿಸಿದ ಯೋಧ

Update: 2019-05-25 18:02 GMT

ಹೊನ್ನಾಳಿ: ಪ್ರೀತಿಯ ವಿಚಾರಕ್ಕೆ ವ್ಯಕ್ತಿಯೊಬ್ಬನ ಮೇಲೆ ಯೋಧರೊಬ್ಬರು ಗುಂಡು ಹಾರಿಸಿರುವ ಘಟನೆ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ಜರುಗಿದೆ.

ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಬಿದರಘಟ್ಟೆ ಗ್ರಾಮದ ಪ್ರಕಾಶ್ ಎನ್ನುವರ ಮಗಳನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಆತ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಪ್ರೀತಿ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ಗೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೋಪಗೊಂಡು ಪ್ರಕಾಶ್ ಎನ್ನುವರ ಮೇಲೆ ಯೋಧ ದೇವರಾಜ್ ಗುಂಡು ಹಾರಿಸಿದ್ದಾರೆ.

ಗುಂಡೇಟು ತಿಂದ ಪ್ರಕಾಶ್ ರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯೋಧನನ್ನು ಪೊಲೀಸರು ಬಂಧಿಸಿದ್ದು, ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News