ಬೆಂಗಳೂರಿನಲ್ಲಿ ಭಾರಿ ಮಳೆ: ಬಿಬಿಎಂಪಿ ಆಯುಕ್ತರಿಂದ ಮಾಹಿತಿ ಪಡೆದ ಮುಖ್ಯಮಂತ್ರಿ

Update: 2019-05-27 04:03 GMT

ಬೆಂಗಳೂರು, ಮೇ 27: ಬೆಂಗಳೂರಿನಲ್ಲಿ ಶನಿವಾರ ಹಾಗೂ ರವಿವಾರ ಭಾರೀ ಗಾಳಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬಿಬಿಎಂಪಿ ಆಯುಕ್ತರೊಂದಿಗೆ ಮಾತನಾಡಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ವಹಿಸಿರುವ ಬಗ್ಗೆ ಮಾಹಿತಿ ಪಡೆದರು.

 ಶನಿವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಬಹಳಷ್ಟು ಮರಗಳು ಉರುಳಿದ್ದವು. ಅವುಗಳನ್ನು ನಿನ್ನೆ ತೆರವುಗೊಳಿಸಲಾಗಿದೆ. ರವಿವಾರ ಯಾವುದೇ ಅನಾಹುತ ಸಂಭವಿಸದಂತೆ ಹಾಗೂ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾದರೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಬಿಬಿಎಂಪಿ ನಿಯಂತ್ರಣ ಕೊಠಡಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಅಧಿಕಾರಿ , ಸಿಬ್ಬಂದಿ ಜಾಗೃತರಾಗಿದ್ಧಾರೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News