ಸಾಧನೆ ಮಾಡಿದ ಕ್ರೀಡಾಪಟುಳ ಶೈಕ್ಷಣಿಕ ಶುಲ್ಕ ಮರುಪಾವತಿ

Update: 2019-05-27 16:23 GMT

ಉಡುಪಿ, ಮೇ 27:2018-19ನೇ ಸಾಲಿನ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಅ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೇಂದ್ರ, ರಾಜ್ಯ ಸರಕಾರಿ ಮತ್ತು ಅನುದಾನಿತ ಶಾಲಾ/ ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವರು. ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ ಕಂಚಿನ ಪದಕ ವಿಜೇತ ರಾದವರು ಹಾಗೂ ವಿಕಲಚೇತನ ಕ್ರೀಡಾಪಟುಗಳು ಕೂಡಾ ಈ ಯೋಜನೆಗೆ ಅರ್ಹರಾಗಿರುತ್ತಾರೆ.

ಅರ್ಹ ಅಭ್ಯರ್ಥಿಗಳು ಕಚೇರಿ ವೆಬ್‌ಸೈಟ್ http://serviceonline.gov.in/Karnataka ಮೂಲಕ ಅರ್ಜಿಯನ್ನು ಜೂನ್ 30ರೊಳಗೆ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಸಲ್ಲಿಸಿದ ಪ್ರಸ್ತಾವನೆಗಳ ಯಥಾಪ್ರತಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಈ ಕಚೇರಿಗೆ ಸಲ್ಲಿಸಬೇಕು.

 ಹೆಚ್ಚಿನ ಮಾಹಿತಿಗಳಿಗೆ ಡಾ. ರೋಶನ್‌ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ (ದೂರವಾಣಿ ಸಂಖ್ಯೆ: 0820-2521324, 9480886467) ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News