ಬೆಳ್ಮಣ್ ಬಳಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
Update: 2019-05-28 12:10 GMT
ಕಾರ್ಕಳ, ಮೇ 27: ಬೆಳ್ಮಣ್ಣು ಜಂತ್ರದಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಸೂಡ ನಿವಾಸಿ ದಿನೇಶ ಆಚಾರ್ಯ ಎಂದು ಗುರುತಿಸಲಾಗಿದೆ. ಎರಡು ಬೈಕ್ಗಳು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಒಂದು ಬೈಕಿನ ಸವಾರ ದಿನೇಶ್ ಆಚಾರ್ಯ ರಸ್ತೆಗೆ ಎಸೆಯಲ್ಪಟ್ಟಿದ್ದು ಈ ವೇಳೆ ಬರುತ್ತಿದ್ದ ಬಸ್ಸೊಂದು ದಿನೇಶ್ ಆಚಾರ್ಯರ ತಲೆ ಮೇಲೆ ಚಲಿಸಿತೆನ್ನಲಾಗಿದೆ. ಇದರಿಂದ ತಲೆ ಸಂಪೂರ್ಣ ಛಿದ್ರಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ದಿನೇಶ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.