ಬೆಳ್ತಂಗಡಿ: ಐಟಿಐ ಉಪನ್ಯಾಸಕ ಕೊಲೆ ಪ್ರಕರಣ; ಇಬ್ಬರು ಆರೋಪಿಗಳು ಸೆರೆ
Update: 2019-05-29 05:59 GMT
ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟೆ ಎಂಬಲ್ಲಿ ಐಟಿಐ ಉಪನ್ಯಾಸಕ ವಿಕ್ರಮ್ ಜೈನ್ ಎಂಬವರನ್ನುಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಸ್ಥಳೀಯ ನಿವಾಸಿಗಳಾದ ನಾಗೇಶ್ ಪೂಜಾರಿ (32) ಹಾಗೂ ಡೀಕಯ್ಯ ನಲ್ಕೆ (39) ಎಂದು ತಿಳಿದುಬಂದಿದೆ. ಅವರು ರೈಲಿನಲ್ಲಿ ಮುಂಬೈಗೆ ಪರಾರಿಯಾಗುತ್ತಿರುವ ವೇಳೆ ಬೈಂದೂರು ರೈಲ್ವೇ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಯಿತು ಎಂದು ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.