ವಿಧಾನ ಪರಿಷತ್ ನೂತನ ಸದಸ್ಯರಾಗಿ ತಿಪ್ಪಣ್ಣ ಕಮಕನೂರು ನೇಮಕ

Update: 2019-05-29 16:34 GMT

ಬೆಂಗಳೂರು, ಮೇ 29: ವಿಧಾನ ಪರಿಷತ್ ನೂತನ ಸದಸ್ಯರನ್ನಾಗಿ ಕಲಬುರಗಿಯ ತಿಪ್ಪಣ್ಣ ಕಮಕನೂರು ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರಕಾರ ತಿಪ್ಪಣ್ಣ ಕಮಕನೂರು ಅವರ ಹೆಸರನ್ನು ವಿಧಾನ ಪರಿಷತ್ ಸ್ಥಾನಕ್ಕೆ ಶಿಫಾರಸ್ಸು ಮಾಡಿತ್ತು. ಸರಕಾರದ ಶಿಫಾರಸ್ಸನ್ನು ಆಧರಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ತಿಪ್ಪಣ್ಣ ಕಮಕನೂರು ಅವರನ್ನು ನೇಮಿಸಿ ಕರ್ನಾಟಕ ರಾಜ್ಯಪತ್ರವನ್ನು ಹೊಡಿಸಿದ್ದಾರೆ.

ಅಭಿನಂದನೆ: ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ನೇಮಕವಾಗಿರುವ ತಿಪ್ಪಣ್ಣ ಕಮಕನೂರು ಅವರು, ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News