ಅರುಣಾಚಲ ಮುಖ್ಯಮಂತ್ರಿಯಾಗಿ ಬಿಜೆಪಿಯ ಪೆಮಾ ಖಂಡು ಪ್ರಮಾಣ ವಚನ

Update: 2019-05-29 17:06 GMT

ಇಟಾನಗರ, ಮೇ 29: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಹಿರಿಯ ಬಿಜೆಪಿ ಮುಖಂಡ ಪೆಮಾ ಖಂಡು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಖಂಡುಗೆ ರಾಜ್ಯಪಾಲ ಬ್ರಿಗೇಡಿಯರ್ (ನಿವೃತ್ತ) ಬಿಡಿ ಮಿಶ್ರಾ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಇವರೊಂದಿಗೆ 11 ಕ್ಯಾಬಿನೆಟ್ ದರ್ಜೆಯ ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ ಹಾಗೂ ಮೇಘಾಲಯದ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾರ್ವತ್ರಿಕ ಚುನಾವಣೆಯ ಜೊತೆಗೇ ಅರುಣಾಚಲ ವಿಧಾನಸಭೆಗೆ ನಡೆದಿದ್ದ ಚುನಾವಣೆಯಲ್ಲಿ ಖಂಡು ನೇತೃತ್ವದಲ್ಲಿ ಬಿಜೆಪಿ ಪಕ್ಷ ವಿಧಾನಸಭೆಯ 60 ಸ್ಥಾನಗಳಲ್ಲಿ 41ರಲ್ಲಿ ಗೆಲುವು ಸಾಧಿಸಿ ಸ್ಪಷ್ಟ ಬಹುಮತ ಗಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News