ರಾಜನಾಥ್ ಸಿಂಗ್, ಅಮಿತ್ ಶಾ, ಗಡ್ಕರಿ, ಸದಾನಂದ ಗೌಡ ಪ್ರಮಾಣ ವಚನ
Update: 2019-05-30 13:59 GMT
ಹೊಸದಿಲ್ಲಿ, ಮೇ 30: ನೂತನ ಕೇಂದ್ರ ಸಚಿವರಾಗಿ ಬಿಜೆಪಿ ನಾಯಕರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಸದಾನಂದ ಗೌಡ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಪ್ರಮಾಣವಚನ ಬೋಧಿಸಿದರು. ಇದೇ ಸಂದರ್ಭ ನಿರ್ಮಲಾ ಸೀತಾರಾಮನ್, ರಾಮ್ ವಿಲಾಸ್ ಪಾಸ್ವಾನ್, ನರೇಂದ್ರ ಸಿಂಗ್ ತೋಮರ್, .ರವಿಶಂಕರ್ ಪ್ರಸಾದ್, ಹರ್ಸಿಮ್ರತ್ ಕೌರ್ ಬಾದಲ್, ತಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಸ್ವೀಕರಿಸಿದರು.