ಹಾಲಿನ ಟ್ಯಾಂಕರ್ ಢಿಕ್ಕಿ: ಪಾದಾಚಾರಿ ಮೃತ್ಯು
Update: 2019-05-30 15:57 GMT
ಬ್ರಹ್ಮಾವರ, ಮೇ 30: ಹಾಲಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೇ 29 ರಂದು ಕೊಳಲಗಿರಿ ಎಂಬಲ್ಲಿ ನಡೆದಿದೆ.
ಮೃತರನ್ನು ಬಳ್ಳಾರಿ ಜಿಲ್ಲೆಯ ನಾಗರಾಜ್(40) ಎಂದು ಗುರುತಿಸಲಾಗಿದೆ.
ಉಪ್ಪೂರು ನಂದಿನಿ ಡೇರಿಯಿಂದ ಕೊಳಲಗಿರಿ ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ರಸ್ತೆಯ ಏರಿಕೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ದಾರಿ ಕೊಡುವ ವೇಳೆ ಚಾಲಕ ನಿರ್ಲಕ್ಷತನದಿಂದ ಹಿಂಭಾಗಕ್ಕೆ ಚಲಾಯಿಸಿದನೆನ್ನಲಾಗಿದೆ. ಈ ವೇಳೆ ಟ್ಯಾಂಕರ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಾಗರಾಜ್ಗೆ ಡಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ನಾಗರಾಜ್ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.