ಬೆಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

Update: 2019-06-01 14:17 GMT

ಬೆಂಗಳೂರು, ಜೂ.1: ನಗರದಲ್ಲಿ ವಿದ್ಯುತ್ ತಂತಿ ಸ್ಪರ್ಶವಾಗಿ ಮೃತಪಟ್ಟಿರುವ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ನಾಲ್ಕು ತಿಂಗಳಲ್ಲಿ ವಿದ್ಯುತ್ ಸಾವನ್ನಪ್ಪಿದ ಸಂಖ್ಯೆ 6ಕ್ಕೆ ಏರಿಕೆಯಾಗಿತ್ತು. ಶುಕ್ರವಾರ ರಾತ್ರಿ ನಗರದ ಮತ್ತಿಕೆರೆಯ ಮಂಜುನಾಥ ನಗರದ ಸತೀಶ್ (23) ಸಾವನ್ನಪ್ಪಿದ್ದಾರೆ.

ಸತೀಶ್, ಮಂಜುನಾಥ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಮೇ 27ರಂದು ಸತೀಶ್ ಮೊದಲನೇ ಮಹಡಿಯಲ್ಲಿ ಕಾಂಕ್ರೀಟ್ ಹಾಕುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ಸತೀಶ್‌ ಗೆ ಶೇ.80 ಸುಟ್ಟ ಗಾಯಗಳಾಗಿದೆ. ಕೂಡಲೇ ಸತೀಶ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸತೀಶ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾನೆ.

ಈ ಸಂಬಂಧ ನಿರ್ಲಕ್ಷದ ಅಡಿಯಲ್ಲಿ ಕಟ್ಟಡ ಮಾಲಕ ಜಯಕುಮಾರ್ ಹಾಗೂ ರಾಮಚಂದ್ರ ಎಂಬುವರ ವಿರುದ್ಧ ದೂರು ದಾಖಲಿಸಿರುವ ಬಸವೇಶ್ವರನಗರ ಪೊಲೀಸರು, ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News