ರಾಜ್ಯದ ಜನ ಈಗಲೂ ಕಾಂಗ್ರೆಸ್ ಪರವಾಗಿದ್ದಾರೆ: ದಿನೇಶ್ ಗುಂಡೂರಾವ್

Update: 2019-06-01 14:18 GMT

ಬೆಂಗಳೂರು, ಜೂ.1: ಕಾಂಗ್ರೆಸ್ ಪಕ್ಷವು ನಗರ ಸ್ಥಳೀಯ ಸಂಸ್ಥೆಗಳ 1221 ಸ್ಥಾನಗಳ ಪೈಕಿ 509 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸುಮಾರು ಶೇ.42ರಷ್ಟು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ರಾಜ್ಯದ ಜನ ಈಗಲೂ ಕಾಂಗ್ರೆಸ್ ಪರವಾಗಿದ್ದಾರೆ ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಬಿಜೆಪಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪರಾಭವಗೊಂಡಿರುವುದು ನನಗೆ ಆಶ್ಚರ್ಯವಾಗಿದೆ. ಈ ಸಂಬಂಧ ತನಿಖೆಯಾಗಬೇಕು ಎಂದು ಅವರು ತಿಳಿಸಿದ್ದಾರೆ.

ಇವಿಎಂಗಳಲ್ಲಿ ತೋರಿಸುತ್ತಿರುವ ಅಂಕಿ ಸಂಖ್ಯೆಗಳಲ್ಲಿ ವ್ಯತ್ಯಾಸ ಕಾಣುತ್ತಿದೆ. 15 ದಿನದ ಹಿಂದೆ ಆಗಿರುವ ಮತದಾನಕ್ಕೂ ವ್ಯತ್ಯಾಸ ಇದೆ ಎಂದರೆ, ಈ ಬಗ್ಗೆ ಪರಿಶೀಲನೆ ಮಾಡಿಕೊಳ್ಳಬೇಕಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣಾ ಪ್ರಕ್ರಿಯೆಗಳು ಪಾರದರ್ಶಕವಾಗಿರಬೇಕಾದ್ದು ಮುಖ್ಯ. ಈ ಸಂಬಂಧ ಭಾರತೀಯ ಚುನಾವಣಾ ಆಯೋಗ ಸ್ಪಷ್ಟಣೆ ನೀಡಬೇಕು ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News