ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಆಹ್ವಾನ

Update: 2019-06-02 16:25 GMT

ಬೆಂಗಳೂರು, ಜೂ.2: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ರಾಷ್ಟ್ರಮಟ್ಟದಲ್ಲಿ ಸಂಘಟನೆ ಮಾಡುತ್ತಿದ್ದು, ರಾಜ್ಯದಲ್ಲೂ ವೀರಶೈವ ಲಿಂಗಾಯತ ಸಮುದಾಯದ ಒಗ್ಗಟ್ಟು ಸಾರುವಲ್ಲಿ ಸಂಘಟನೆ ಅವಿರತವಾಗಿ ಶ್ರಮಿಸುತ್ತಿದೆ. ಈಗಾಗಲೇ ಗ್ರಾಮ ಮಟ್ಟದಲ್ಲಿಯೂ ಸಂಘಟನೆ ಮಾಡುತ್ತಿದ್ದು, ಸಮುದಾಯದ ಅಭಿವೃದ್ಧಿ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ಸಂಘಟನೆಯ ವಿವಿಧ ಧ್ಯೇಯೋದ್ದೇಶಗಳನ್ನು ರಾಜ್ಯದಲ್ಲಿ ಸಮರ್ಥವಾಗಿ ಜಾರಿಗೊಳಿಸುವುದಲ್ಲದೇ ವೀರಶೈವ ಲಿಂಗಾಯತ ಸಮಾಜವನ್ನು ಸಮಗ್ರವಾಗಿ ಸಂಘಟಿಸುವಂತಹ ಸಮರ್ಥ ರಾಜ್ಯಾಧ್ಯಕ್ಷ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News