ಇಫ್ತಾರ್ ಕೂಟ ಆಯೋಜಿಸಿ, ರಮಝಾನ್ ಶುಭಾಶಯ ಕೋರಿದ ಸಿದ್ದರಾಮಯ್ಯ

Update: 2019-06-02 17:37 GMT

ಮೈಸೂರು,ಜೂ.2: ರಮಝಾನ್ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಮುಸ್ಲಿಮರಿಗೆ ಇಫ್ತಾರ್ ಕೂಟ ಆಯೋಜಿಸಿದ್ದರು.

ನಗರದ ಮೈಸೂರು-ಬೆಂಗಳೂರು ಮುಖ್ಯ ರಸ್ತೆಯಲ್ಲಿರುವ ಫಂಕ್ಷನ್ ಹಾಲ್‍ನಲ್ಲಿ ಆಯೋಜನೆ ಮಾಡಿ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಿದ್ದರು. ಇದೇ ವೇಳೆ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ಎಲ್ಲಾ ಮುಸ್ಲಿಂ ಬಂಧುಗಳಿಗೆ ರಮಝಾನ್ ಹಬ್ಬದ ಶುಭಾಶಯ ಕೋರಿದರು.

ಮಾಧ್ಯಮಗಳಿಂದ ದೂರ ಸರಿದ ಸಿದ್ದರಾಮಯ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಮೈಸೂರಿಗೆ ಆಗಮಿಸಿದರು. ಅವರ ರಾಮಕೃಷ್ಣ ನಗರದ ಮನೆಯಲ್ಲಿ ಮಾಧ್ಯಮದವರು ಅವರನ್ನು ಮಾತನಾಡಿಸಲು ಹೋದಾಗ ಯಾವುದೇ ಪ್ರತಿಕ್ರಿಯೆ ನೀಡದೆ ಒಳ ಹೋದರು. ನಂತರ ಸಂಜೆ ಆಯೋಜಿಸಿದ್ದ ಇಫ್ತಾರ್ ಕೂಟಕ್ಕೆ ಆಗಮಿಸಿದ ಅವರು ಅಲ್ಲಿಯೂ ಸಹ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸದೆ ರಮಝಾನ್ ಹಬ್ಬದ ಶುಭಾಶಯಗಳು ಎಂದಷ್ಟೇ ಹೇಳಿ ಹೊರಟು ಹೋದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News