ರೇಷ್ಮಾ ಪಡೇಕನೂರ ಹತ್ಯೆ ಪ್ರಕರಣ;ಆರೋಪಿ ಬಂಧನ
Update: 2019-06-03 07:09 GMT
ವಿಜಯಪುರ, ಜೂ.3: ಕಾಂಗ್ರೆಸ್ ಮುಖಂಡೆ, ಜೆಡಿಎಸ್ನ ವಿಜಯಪುರ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ಹತ್ಯಾ ಪ್ರಕರಣದ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
ಸೊಲ್ಲಾಪುರದ ಎಂಐಎಂ ಮುಖಂಡ ತೌಫಿಕ್ ಶೇಕ್ ಅಲಿಯಾಸ್ ಪೈಲ್ವಾನ್ ಬಂಧಿತ ಆರೋಪಿ.
ಬಸವನಬಾಗೇವಾಡಿ ಸಿಪಿಐ ಮಹದೇವ ಶಿರಹಟ್ಟಿ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ತೌಫಿಕ್ ನನ್ನು ಬಂಧಿಸಿದ್ದಾರೆ.
ಮೇ 17 ರಂದು ರೇಷ್ಮಾ ಹತ್ಯೆಯಾಗಿತ್ತು.