ಎಸ್ಪಿ-ಬಿಎಸ್ಪಿ ಮೈತ್ರಿ ಅಂತ್ಯ?: ಸೂಚನೆ ನೀಡಿದ ಮಾಯಾವತಿ

Update: 2019-06-03 14:05 GMT

ಲಕ್ನೋ, ಜೂ.3: ಮಹಾಘಟಬಂಧನದ ಭವಿಷ್ಯದ ಬಗ್ಗೆ ಪ್ರಶ್ನೆಗಳಿರುವಂತೆಯೇ ಎಸ್ಪಿ ಜೊತೆಗಿನ ಮೈತ್ರಿ ಕೊನೆಗೊಳಿಸುವ ಬಗ್ಗೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ 11 ಸೀಟುಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದವರು ಘೋಷಿಸಿದ್ದಾರೆ. ದಿಲ್ಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಗೆ ತಯಾರಾಗುವಂತೆ ಶಾಸಕರು ಮತ್ತು ನೂತನ ಸಂಸದರಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News