ಕಾಸರಗೋಡು : ಕಾರು ಢಿಕ್ಕಿ - ಬೈಕ್ ಸವಾರ ಮೃತ್ಯು

Update: 2019-06-04 06:34 GMT

ಕಾಸರಗೋಡು : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಕುಂಡಂಗುಳಿಯ ಮರುತ್ತಡ್ಕ ಎಂಬಲ್ಲಿ ನಡೆದಿದೆ.

ಮೃತರನ್ನು ಕುಂಡಂಗುಳಿಯ   ಚರಣ್ ರಾಜ್ ( 22) ಎಂದು ಗುರುತಿಸಲಾಗಿದೆ.

ಮರುತ್ತಡ್ಕ ಗ್ಯಾರೇಜ್ ನಲ್ಲಿ  ಇಲೆಕ್ಟ್ರಾನಿಕ್ಸ್ ಕೆಲಸ ನಿರ್ವಹಿಸುತ್ತಿದ್ದ ಚರಣ್ ರಾಜ್ ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಢಿಕ್ಕಿಯ   ರಭಸಕ್ಕೆ ಬೈಕ್  ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡಿದ್ದ  ಚರಣ್  ರಾಜ್ ನನ್ನು  ಕಾಸರಗೋಡಿನ  ಖಾಸಗಿ ಆಸ್ಪತ್ರೆಗೆ ತಲಪಿಸಿದರೂ ಜೀವ  ಉಳಿಸಲಾಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News