ಮೈಸೂರು ವಿವಿ ಅಂಬೇಡ್ಕರ್ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕರಾಗಿ ಬಸವರಾಜ ದೇವನೂರ ನೇಮಕ

Update: 2019-06-04 18:10 GMT

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಬಸವರಾಜ ದೇವನೂರ ಅವರನ್ನು ನೇಮಕ ಮಾಡಿ ಆದೇಶ ಮಾಡಲಾಗಿದೆ.

ಜೂ.1 ರ ಪೂರ್ವಾಹ್ನದಿಂದ ಜಾರಿಗೆ ಬಂದಂತೆ ಸಂಯೋಜನಾಧಿಕಾರಿಗಳು, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರ, ಮಾನಸಗಂಗೋತ್ರಿ, ಇವರ ಸಮ್ಮುಖದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ.

ಬಸವರಾಜ ದೇವನೂರ ಅವರು ಖ್ಯಾತ ಸಾಹಿತಿ ದೇವನೂರ ಮಹದೇವ ಅವರ ಸಹೋದರರಾಗಿದ್ದು ರಾಜ್ಯ ಸಂಪನ್ಮೂಲ ಕೇಂದ್ರದ ಸಾಹಿತ್ಯ ರಚನಾ ಹಾಗೂ ಮಾಧ್ಯಮ ವಿಭಾಗದ ಕಾರ್ಯಕ್ರಮ ಸಮನ್ವಯಾಧಿಕಾರಿಯಾಗಿ ಹಾಗೂ ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News