ದೇವಸ್ಥಾನ ಪ್ರವೇಶಿಸಿದ ದಲಿತ ಬಾಲಕನಿಗೆ ಮಾರಣಾಂತಿಕ ಹಲ್ಲೆ: ಆರೋಪ

Update: 2019-06-06 08:41 GMT

ಜೈಪುರ್, ಜೂ.6: ರಾಜಸ್ಥಾನದ ಪಾಲಿ ಜಿಲ್ಲೆ ಧನೇರಿಯ ಎಂಬ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಬಾಲಕನೊಬ್ಬನಿಗೆ ಕೇಸರಿ ಶಾಲು ಧರಿಸಿದ ವ್ಯಕ್ತಿಗಳ ತಂಡ ಅಮಾನುಷವಾಗಿ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ.

ಬಾಲಕನ ಕೈಕಾಲುಗಳನ್ನು ಹಗ್ಗದಿಂದ ಬಿಗಿಯಾಗಿ ಕಟ್ಟಿರುವುದು ಹಾಗೂ ಕೇಸರಿ ಶಾಲು ಧರಿಸಿದವರು ಆತನಿಗೆ ಕೋಲುಗಳಿಂದ ಥಳಿಸುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಬಾಲಕ ತನ್ನನ್ನು ಬಿಟ್ಟು ಬಿಡುವಂತೆ ಗೋಗರೆದರೂ ದುಷ್ಕರ್ಮಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ಆದರೆ ಬಾಲಕ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಳುಳ ನೀಡಿದ್ದಕ್ಕೆ ಆತನನ್ನು ಥಳಿಸಲಾಗಿತ್ತೆಂದು ರಾಜಸ್ಥಾನ ಪೊಲೀಸರು ಹೇಳುತ್ತಿದ್ದು, ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯನ್ವಯ ಪ್ರಕರಣ ದಾಖಲಿಸಿದ್ದಾರೆ. ಬಾಲಕನನ್ನು ಈಗ ಬಾಲಾಪರಾಧಿಗಳ  ಆಶ್ರಯತಾಣಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News