ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಭಾರೀ ಆಘಾತ

Update: 2019-06-06 11:50 GMT

ಹೈದರಾಬಾದ್, ಜೂ.6: ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆಯುಂಟು ಮಾಡಿದ ನಡೆಯಲ್ಲಿ ಪಕ್ಷದ 12 ಶಾಸಕರು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಸ್ಪೀಕರ್ ರನ್ನು ಭೇಟಿಯಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು ಟಿಆರ್ ಎಸ್ ಜೊತೆ ವಿಲೀನಗೊಳಿಸುವಂತೆ ಪ್ರಸ್ತಾವ ಸಲ್ಲಿಸಿದ್ದಾರೆ.

ನಲ್ಗೊಂಡಾದ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್ ನ ತೆಲಂಗಾಣ ರಾಜ್ಯ ಘಟಕದ ಮುಖ್ಯಸ್ಥ ಉತ್ತಮ್ ಕುಮಾರ್ ರೆಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ವಿಧಾಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ 18ಕ್ಕಿಳಿದಿತ್ತು.

ಈ ನಡುವೆ ಕಾಂಗ್ರೆಸ್ ಶಾಸಕ ಮೋಹಿತ್ ರೆಡ್ಡಿ ಟಿಆರ್ ಎಸ್ ಕಾರ್ಯಕಾರಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಪುತ್ರ ಕೆಟಿ ರಾಮ ರಾವ್ ರನ್ನು ಭೇಟಿಯಾಗಿ ತನ್ನ ಬೆಂಬಲ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News