‘ಬರ’ : ಜೂ.12ರಿಂದ ಡಿಸಿ, ಸಿಇಓಗಳ ಸಭೆ

Update: 2019-06-06 16:32 GMT

ಬೆಂಗಳೂರು, ಜೂ. 6: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ಸೇರಿದಂತೆ ಬರ ಪರಿಹಾರ ಸಂಬಂಧ ಸಿಎಂ ಕುಮಾರಸ್ವಾಮಿ ಜೂ.12 ಮತ್ತು 13ರಂದು ಎಲ್ಲ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಓಗಳ ಸಭೆ ನಡೆಸಲಿದ್ದಾರೆ.

ಜೂ.12ರ ಬುಧವಾರ ಬೆಳಗ್ಗೆ 10ರಿಂದ ವಿಧಾನಸೌಧದ ಮೂರನೆ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ವಿವಿಧ ಇಲಾಖೆ ಸಚಿವರು, ಸರಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News