ಶಿರ್ವ ಗ್ರಾಪಂ ಮಾಜಿ ಅಧ್ಯಕ್ಷೆ ಅನಸೂಯಾ ನಿಧನ

Update: 2019-06-07 13:44 GMT

ಶಿರ್ವ, ಜೂ.7: ಶಿರ್ವ ಮಿತ್ರಬೆಟ್ಟು ಸರಕಾರಿ ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ, ಶಿರ್ವ ಗ್ರಾಪಂನ ಮಾಜಿ ಅಧ್ಯಕ್ಷೆ ಅನಸೂಯಾ ಮಹಾಲಿಂಗ(85) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ಬಂಟಕಲ್ಲಿನಲ್ಲಿರುವ ಸ್ವಗೃಹದಲ್ಲಿ ನಿಧನರಾದರು.

ಇವರು ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಹಾಗೂ ಮಣಿಪಾಲ ರಾಜೀವನಗರ ಸರಕಾರಿ ಸಂಯುಕ್ತ ಫ್ರೌಡಶಾಲಾ ಶಿಕ್ಷಕ ಸತ್ಯಸಾಯಿ ಪ್ರಸಾದ್ ಸೇರಿದಂತೆ ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ಭಾರತ ಸೇವಾದಳ ಉಡುಪಿ ಜಿಲ್ಲಾ ಸಂಟಕ ಫಕೀರಪ್ಪಗೌಡ, ಜಿಪಂ ಸದಸ್ಯ ವಿಲ್ಸನ್ ರೊಡ್ರಿಗಸ್, ಶಿರ್ವ ಗ್ರಾಪಂ ಸದಸ್ಯ ರಾಮರಾಯ ಪಾಟ್ಕರ್, ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ, ಕೆ.ಶ್ರೀನಿವಾಸ ರಾವ್, ಶಿರ್ವ ಮಂಡಲ ಪಂಚಾಯತ್ ಮಾಜಿ ಉಪಪ್ರದಾನ ಕೆ.ದಿನೇಶ ಸುವರ್ಣ, ಟೀಚರ್ಸ್‌ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಸುಂದರ ಮಾಸ್ತರ್ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News