ಮನೆಗಳ್ಳತನ: ಇಬ್ಬರ ಬಂಧನ, 52 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ

Update: 2019-06-07 16:13 GMT

ಬೆಂಗಳೂರು, ಜೂ.7: ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡಿ ಮೋಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ನಗದು ಚಿನ್ನ, ಬೆಳ್ಳಿ ಸೇರಿ 52 ಲಕ್ಷ ಮೌಲ್ಯದ ಮಾಲು ಜಪ್ತಿ ಮಾಡುವಲ್ಲಿ ಇಲ್ಲಿನ ವೈಯಾಲಿಕಾವಲ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೂರ್ಯಸಿಟಿಯ ಶ್ರೀನಿವಾಸ(32) ಹಾಗೂ ಇಟ್ಟಮಡುವಿನ ಮಂಜುನಾಥ್(31) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ವೈಯಾಲಿಕಾವಲ್‌ನಲ್ಲಿ ನಡೆದಿದ್ದ ಎರಡು ಮನೆಕಳವು ಪ್ರಕರಣಗಳನ್ನು ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್ ಮೊದಲಿನಿಂದಲೂ ಮನೆಗಳ್ಳತನ ಹಾಗೂ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಆರೋಪಿಗಳನ್ನ ತೀವ್ರವಾಗಿ ವಿಚಾರಣೆಗೊಳಪಡಿಸಿದಾಗ ತಾವರೆಕೆರೆ, ಮಾದನಾಯಕನಹಳ್ಳಿ, ಬ್ಯಾಡರಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ 6 ಕಳವು ಪ್ರಕರಣ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News