ತೋಟದಲ್ಲಿ ಜಾರಿ ಬಿದ್ದು ಮೃತ್ಯು

Update: 2019-06-07 16:39 GMT

ಶಂಕರನಾರಾಯಣ, ಜೂ.7: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೆಳ್ವೆ ಗ್ರಾಮದ ಗುಮ್ಮಹೊಲ ಸೆಟ್ಟೋಳಿ ಎಂಬಲ್ಲಿ ಜೂ.6 ರಂದು ಬೆಳಗ್ಗೆ ಎಂಬಲ್ಲಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಲಕ್ಷಣ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಸೆಟ್ಟೋಳಿ ರಾಮಚಂದ್ರ ಅಲ್ಸೆ ಎಂಬವರ ಮನೆಯ ಸಮೀಪದ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು, ಈ ವೇಳೆ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News