ಮೈಸೂರು: 2ನೇ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

Update: 2019-06-07 17:01 GMT

ಮೈಸೂರು,ಜೂ.7: ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಐಟಿಸಿ ಕಾರ್ಖಾನೆಯ ಕಾರ್ಮಿಕ ಮಹದೇವು(35) ಎಂದು ಗುರುತಿಸಲಾಗಿದೆ. ಇವರು ನಂಜನಗೂಡು ತಾಲೂಕಿನ ಕೆಂಪಿ ಸಿದ್ದನಹುಂಡಿ ಗ್ರಾಮದ ನಿವಾಸಿಯಾಗಿದ್ದು ಇಂದು ಬೆಳಗಿನ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಆಯ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.

ಎರಡನೆಯ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು ಮೃತದೇಹವನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತ ವ್ಯಕ್ತಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೆಂಪಿಸಿದ್ದನಹುಂಡಿ ಗ್ರಾಮಸ್ಥರು ಮತ್ತು ಮೃತ ಕುಟುಂಬದವರು ಕಂಪೆನಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಸ್ಥಳಕ್ಕೆ ಆಗಮಿಸಿದ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News