ಮೈತ್ರಿ ಸರಕಾರಕ್ಕೆ ಧಕ್ಕೆ ಇಲ್ಲ: ಚಲುವರಾಯಸ್ವಾಮಿಗೆ ಶಾಸಕ ಸುರೇಶ್ ಗೌಡ ತಿರುಗೇಟು
Update: 2019-06-07 18:06 GMT
ಮಂಡ್ಯ, ಜೂ.7: ಸಮ್ಮಿಶ್ರ ಸರಕಾರದ ಬಗ್ಗೆ ಮಾತನಾಡೋಕೆ ಅವರಿಗೆ ಯೋಗ್ಯತೆ ಇಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಪ್ರಧಾನಿಯಾಗುವುದಕ್ಕೇ ಅವರ ವಿರೋಧವಿತ್ತು ಎಂದು ನಾಗಮಂಗಲ ಜೆಡಿಎಸ್ ಶಾಸಕ ಕೆ.ಸುರೇಶ್ಗೌಡ ಅವರು ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ಚಲುವರಾಯಸ್ವಾಮಿ ಹೇಳಿಕೆಗೆ ಮದ್ದೂರಿನಲ್ಲಿ ಪ್ರತಿಕ್ರಿಯಿಸಿದ ಸುರೇಶ್ಗೌಡ, ಮೈತ್ರಿ ಸರಕಾರಕ್ಕೆ ಯಾವುದೇ ಧಕ್ಕೆ ಇಲ್ಲ. ಆದರೆ, ಚಲುವರಾಯಸ್ವಾಮಿ ಅವರಿಗೆ ವೈಯಕ್ತಿಕವಾಗಿ ಉಳಿಗಾಲವಿಲ್ಲ. ಸೋತವರು ಮುಂದೆ ಬುದ್ದಿ ಕಲಿಯುತ್ತಾರೆ ಎಂದು ಅಭಿಪ್ರಾಯಪಟ್ಟರು.
ಎಚ್.ವಿಶ್ವನಾಥ್ ಅವರು ರಾಜೀನಾಮೆ ಹಿಂಪಡೆಯಲಿದ್ದು, ಅವರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ವಿಶ್ವಾಸ ವ್ಯಕ್ತಪಡಿಸಿದರು.